ವರದಿ /ಚಿತ್ರ :ಈ ಮೀಡಿಯಾ
ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಗೌಡರ ಹಂತಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಇನ್ನೂ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿ ಚೇತನ್ ನನ್ನು ಪೊಲೀಸರು ವಶಪಡಿಸಿದ ವೇಳೆ, ತಾನು ವಿಷ ಪದಾರ್ಥ ಸೇವಿಸಿದ್ದ ಬಗ್ಗೆ ಮಾಹಿತಿ ನೀಡಿದ್ದ.ಪೊಲೀಸರು ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೆನ್ಹಾಕ್ ಆಸ್ಥೆಯ ವೈದ್ಯರ ಸಲಹೆಯಂತೆ, ಸುಮಾರು ಐದು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿಟ್ಟು ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕಾದ ಹಿನ್ನೆಲೆಯಲ್ಲಿ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕವಷ್ಟೆ ಪೊಲೀಸರು ಈತನ ಅಧಿಕೃತ ಬಂಧನ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.ಆಸ್ಪತ್ರೆಯಲ್ಲಿ ಆರೋಪಿಗೆ ಪೊಲೀಸ್ ಭದ್ರತೆಗೆ ಕಲ್ಪಿಸಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
