ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.ಈ ಸಂದರ್ಭ ಶ್ರೀಗಳನ್ನು ಕ್ಷೇತ್ರಕ್ಕೆ ವಾದ್ಯಗೋಷ್ಠಿಯೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ದೇವಳದ ತಂತ್ರಿವರ್ಯರಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ, ಹಾಗೂ ದೇವಳದ ಪ್ರಧಾನ ಅರ್ಚಕರಾದ ಮಾಧವ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್, ಅನಂತ ಭಟ್,ಪದ್ಮನಾಭ ಭಟ್ ಮಾದಲಾದವರು ದೇವಳದ ಇತಿಹಾಸವನ್ನು ಶ್ರೀಗಳಿಗೆ ವಿವರಿಸಿದರು.
ದೇವಳದ ಆಡಳಿತ ಮೊಕ್ತಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್, ಕೋಡಿಮಜಲ್ ಅನಂತಪದ್ಮನಾಭ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
