28.5 C
ಮಂಗಳೂರು
September 4, 2026
Uncategorizedಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಬ್ರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ :ಕಾಂಗ್ರೆಸ್‌ ಕಾಂಗ್ರೆಸ್‌ ಮುಖಂಡರಿಂದ ಅಹವಾಲು ಸ್ವೀಕರಿಸಿದ ಸಚಿವರು;

ವರದಿ /ಚಿತ್ರ :ಈ ಮೀಡಿಯಾ

ಹೆಬ್ರಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಬುಧವಾರ ಹೆಬ್ರಿಗೆ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಅಹವಾಲು ಸ್ವೀಕರಿಸಿದರು.ಉಡುಪಿ ತೀರ್ಥಹಳ್ಳಿ – ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮತ್ತು ಹೆಬ್ರಿಯ ಪ್ರಮುಖ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸಲು ಸ್ಥಳೀಯರಿಂದ ಸಚಿವರಿಗೆ ಮನವಿ ನೀಡಲಾಯಿತು.ಈ ಸಂದರ್ಭ ಸಚಿವರು ಮಾತನಾಡಿ, ಆಗುಂಬೆ ಘಾಟಿಯ ಅಭಿವೃದ್ಧಿ ಬಗ್ಗೆ ನಾನು ಈಗಾಗಲೇ ಸ್ಥಳ ಪರಿಶೀಲಿಸಿ ಇಲ್ಲಿಗೆಇಂದು ಬಂದಿದ್ದೇನೆ. ಈ ಬಗ್ಗೆ ಇನ್ನೊಂದು ಬಾರಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಆಗುಂಬೆ ಘಾಟಿ ವಿಸ್ತರಣೆಗೆ ಅರಣ್ಯ ಇಲಾಖೆಯ ತೊಡಕು ಇದೆ. ಇದನ್ನು ಸರಿಪಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಮಹಿಳಾ ಗಟಕಧ್ಯಕ್ಷೆ ಭಾನು ಭಾಸ್ಕರ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಸಹಿತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು,ಕಾಪು ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕೌಂಟರ್;

Voiceoftulunadu

ಪ್ರಿಯದರ್ಶಿನಿ ಸೊಸೈಟಿಯ ಸಾಧನೆ ಮಾದರಿಯಾಗಿದೆ, ಗ್ರಾಹಕರ ವಿಶ್ವಾಸಗಳಿಸಿದೆ : ಯು.ಟಿ.ಖಾದರ್

voiceoftulunadu

ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಅನಾವರಣ: ಸೇವಾಪತ್ರ ಅನಾವರಣಗೊಳಿಸಿದ ಅದಮಾರು ಈಶಪ್ರಿಯತೀರ್ಥ ಶ್ರೀಪಾದರು;

Voiceoftulunadu

Leave a Comment